ಬ್ರೇಕಿಂಗ್ ನ್ಯೂಸ್
08-09-21 01:18 pm Mangaluru Correspondent ಕ್ರೈಂ
ಪುತ್ತೂರು, ಸೆ.8: ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಗೆ ತಡೆಯೊಡ್ಡಿದ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ಕು ಮಂದಿ ಆರೋಪಿಗಳು ಬಂಧನ ತಪ್ಪಿಸಲು ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹ್ಯಾರಿಸ್, ಮಹಮ್ಮದ್ ತೌಸಿಫ್, ಶಂಸುದ್ದೀನ್ ಬಂಧಿತರು. ಇವರು ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

ಪುತ್ತೂರು ನಗರ ಠಾಣೆ ಇನ್ ಸ್ಪೆಕ್ಟರ್ ಗೋಪ ನಾಯ್ಕ್ ಮತ್ತು ಸಬ್ ಇನ್ ಸ್ಪೆಕ್ಟರ್ ಸುತೇಶ್ ನೇತೃತ್ವದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆಗಸ್ಟ್ 15ರಂದು ಕಬಕ ಗ್ರಾಮ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಥಕ್ಕೆ ಚಾಲನೆ ನೀಡುತ್ತಿದ್ದಂತೆ ಎಸ್ ಡಿಪಿಐ ಕಾರ್ಯಕರ್ತರ ಗುಂಪು ರಥಕ್ಕೆ ತಡೆಯೊಡ್ಡಿ ಧಿಕ್ಕಾರ ಘೋಷಣೆ ಕೂಗಿತ್ತು. ಅಲ್ಲದೆ, ರಥದಲ್ಲಿದ್ದ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಚಿತ್ರವನ್ನು ತೆಗೆದು ಟಿಪ್ಪು ಚಿತ್ರ ಹಾಕುವಂತೆ ಒತ್ತಡ ಹೇರಿತ್ತು. ಈ ಬಗ್ಗೆ ಕಡಬ ಗ್ರಾಮ ಪಂಚಾಯತ್ ಪಿಡಿಓ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
Read: ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ತಡೆ ; ಮೂವರು ಆರೋಪಿಗಳ ಬಂಧಿಸಿದ ಪುತ್ತೂರು ಪೊಲೀಸರು
The police have arrested four more persons relating to the obstruction of the movement of the 'Grama Swarajya Ratha' that was taken around on the occasion of the celebration of 75 years of Indian independence within Kabaka gram panchayat limits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am