ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am