ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm