ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am