ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm