ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am