ಬ್ರೇಕಿಂಗ್ ನ್ಯೂಸ್
09-09-21 03:05 pm Headline Karnataka News Network ಕ್ರೈಂ
ಶಿವಮೊಗ್ಗ, ಸೆ.9 : ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ಆತಂಕ ಮೂಡಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಓರ್ವ ಪರಾರಿಯಾಗಿದ್ದಾನೆ.
ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬುಧವಾರ ಬೆಳಗ್ಗೆ ಕಾರಿನಲ್ಲಿ ಬಂದಿದ್ದ ಯುವಕರು ಕ್ಷುಲ್ಲಕ ವಿಚಾರಕ್ಕೆ ಸಾರ್ವಜನಿಕರಿಗೆ ಚಾಕು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಯುವಕರು ಒಬ್ಬ ವ್ಯಕ್ತಿ ಮತ್ತು ಪೊಲೀಸ್ ಬ್ಯಾರಿಕೇಡ್ಗೆ ಕಾರು ಡಿಕ್ಕಿ ಹೊಡೆಸಿದ್ದರು. ಈ ಬಗ್ಗೆ ಸ್ಥಳೀಯರು ಪ್ರಶ್ನಿಸುತ್ತಿದ್ದಂತೆ, ಕಾರಿನಲ್ಲಿದ್ದ ನಾಲ್ವರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಕಾರನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದ್ದರು. ಬಳಿಕ ಕಾರನ್ನು ಸ್ಳಳದಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿದ ಯುವಕರನ್ನು ಜನರು ಅಟ್ಟಾಡಿಸಿ ಹಿಡಿದು, ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ಗಾಂಜಾ ಸೇವಿಸಿದ್ದು, ಅದರ ಮತ್ತಿನಲ್ಲಿ ದುಷ್ಕೃತ್ಯ ಎಸಗಲು ಮುಂದಾಗಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಗಾಂಜಾ ಸೇವೆನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತದೆ. ಅಲ್ಲದೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬನಿಗೆ ಅಪರಾಧ ಹಿನ್ನೆಲೆಯಿದೆ. ಅಂಗಡಿಯೊಂದರಲ್ಲಿ 2.50 ಲಕ್ಷ ರೂ. ಹಣ ಕಳವು ಮಾಡಿ ಸಿಕ್ಕಿಬಿದ್ದಿದ್ದ. ಎರಡು ವಾರದ ಹಿಂದಷ್ಟೇ ಈತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿಸಿದ್ದಾರೆ.
ಯುವಕರು ಬಳಕೆ ಮಾಡಿದ್ದ ಕಾರು ಅವರದ್ದಲ್ಲ. ಕಳ್ಳತನ ಮಾಡಿದ್ದ ಕಾರನ್ನು ಬಳಸಿ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕಾರು ಕಳ್ಳತನ ಆಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Three arrested for showing weapons in the road to Public in Shivamogga. When arrested the police have got to know that the car they were using was a theft car.
30-06-25 12:05 pm
HK News Desk
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm