ಬ್ರೇಕಿಂಗ್ ನ್ಯೂಸ್
09-09-21 03:05 pm Headline Karnataka News Network ಕ್ರೈಂ
ಶಿವಮೊಗ್ಗ, ಸೆ.9 : ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ಆತಂಕ ಮೂಡಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಓರ್ವ ಪರಾರಿಯಾಗಿದ್ದಾನೆ.
ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬುಧವಾರ ಬೆಳಗ್ಗೆ ಕಾರಿನಲ್ಲಿ ಬಂದಿದ್ದ ಯುವಕರು ಕ್ಷುಲ್ಲಕ ವಿಚಾರಕ್ಕೆ ಸಾರ್ವಜನಿಕರಿಗೆ ಚಾಕು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಯುವಕರು ಒಬ್ಬ ವ್ಯಕ್ತಿ ಮತ್ತು ಪೊಲೀಸ್ ಬ್ಯಾರಿಕೇಡ್ಗೆ ಕಾರು ಡಿಕ್ಕಿ ಹೊಡೆಸಿದ್ದರು. ಈ ಬಗ್ಗೆ ಸ್ಥಳೀಯರು ಪ್ರಶ್ನಿಸುತ್ತಿದ್ದಂತೆ, ಕಾರಿನಲ್ಲಿದ್ದ ನಾಲ್ವರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಕಾರನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದ್ದರು. ಬಳಿಕ ಕಾರನ್ನು ಸ್ಳಳದಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿದ ಯುವಕರನ್ನು ಜನರು ಅಟ್ಟಾಡಿಸಿ ಹಿಡಿದು, ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ಗಾಂಜಾ ಸೇವಿಸಿದ್ದು, ಅದರ ಮತ್ತಿನಲ್ಲಿ ದುಷ್ಕೃತ್ಯ ಎಸಗಲು ಮುಂದಾಗಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಗಾಂಜಾ ಸೇವೆನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತದೆ. ಅಲ್ಲದೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬನಿಗೆ ಅಪರಾಧ ಹಿನ್ನೆಲೆಯಿದೆ. ಅಂಗಡಿಯೊಂದರಲ್ಲಿ 2.50 ಲಕ್ಷ ರೂ. ಹಣ ಕಳವು ಮಾಡಿ ಸಿಕ್ಕಿಬಿದ್ದಿದ್ದ. ಎರಡು ವಾರದ ಹಿಂದಷ್ಟೇ ಈತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿಸಿದ್ದಾರೆ.
ಯುವಕರು ಬಳಕೆ ಮಾಡಿದ್ದ ಕಾರು ಅವರದ್ದಲ್ಲ. ಕಳ್ಳತನ ಮಾಡಿದ್ದ ಕಾರನ್ನು ಬಳಸಿ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕಾರು ಕಳ್ಳತನ ಆಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Three arrested for showing weapons in the road to Public in Shivamogga. When arrested the police have got to know that the car they were using was a theft car.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm