ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
30-06-25 01:44 pm
HK News Desk
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm