ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm