ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm