ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm