ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm