ಬ್ರೇಕಿಂಗ್ ನ್ಯೂಸ್
11-09-21 01:39 pm Headline Karnataka News Network ಕ್ರೈಂ
ಬೆಂಗಳೂರು, ಸೆ.11 : ರಾಜಧಾನಿ ಬೆಂಗಳೂರಿನಲ್ಲಿ ಒಬ್ಬಂಟಿ ವೃದ್ಧರ ಮನೆಗಳನ್ನೇ ಗುರಿಯಾಗಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ ಆರು ಮಂದಿಯನ್ನು ಬೆಳ್ಳಂದೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಳ್ಳಂದೂರು ನಿವಾಸಿ ಲಕ್ಷ್ಮಣ್ ಎಂಬವರು ನೀಡಿದ ದೂರಿನ ಮೇರೆಗೆ ತೇಜಸ್, ನಿತಿನ್, ಹೃತಿಕ್, ರಾಜವರ್ಧನ, ಅರುಣ್, ಮಹದೇವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಬೆಂಗಳೂರು, ಹಾಸನ ಸೇರಿ ವಿವಿಧ ಕಡೆಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಆರೋಪಿಗಳು, ಜೈಲಿನಲ್ಲಿರುವ ತಮ್ಮ ಇತರ ಸಹಚರರನ್ನು ಬಿಡಿಸಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ ಐವರನ್ನು ಒಗ್ಗೂಡಿಸಿ ದರೋಡೆಗೆ ಇಳಿದಿದ್ದರು. ವಯೋವೃದ್ದರು ಇರುವ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಆರೋಪಿಗಳು ಆ.20 ರಂದು ಬೆಳ್ಳಂದೂರಿನ ಎಂಟನೇ ಕ್ರಾಸ್ ಬಳಿ ಲಕ್ಷ್ಮಣ್ ಎಂಬವರ ಮನೆ ಗುರುತಿಸಿ ಬಾಗಿಲು ತಟ್ಟಿದ್ದಾರೆ. ಈ ವೇಳೆ ಯಾರೋ ಪರಿಚಯಸ್ಥರು ಅಂತ ತಿಳಿದ ವೃದ್ದ ಲಕ್ಷ್ಮಣ್ ಬಾಗಿಲು ತೆರೆಯುತ್ತಿದ್ದಂತೆ ಒಳ ನುಗ್ಗಿದ್ದು ದರೋಡೆ ನಡೆಸಿದ್ದಾರೆ.

ಮನೆಗೆ ನುಗಿದ ದರೋಡೆಕೋರರು ಲಕ್ಷ್ಮಣ್ ಅವರನ್ನು ಹಗ್ಗದಿಂದ ಕೈ-ಕಾಲು ಕಟ್ಟಿದ್ದು ಬಾಯಿಗೆ ಪ್ಲಾಸ್ಟರ್ ಹಾಕಿ ಬಾಯಿ ಮುಚ್ಚಿಸಿದ್ದರು. ಶಬ್ದ ಮಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದರು. ನಂತರ ಆರು ಜನ ಆರೋಪಿಗಳು 62 ವರ್ಷದ ವೃದ್ದನ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿದ್ದ ಬೀರುವನ್ನು ಒಡೆದು ಅದರಲ್ಲಿದ್ದ 1.40 ಲಕ್ಷ ರೂ. ನಗದು ಹಾಗೂ ಲಕ್ಷಾಂತರ ಬೆಲೆಯ ಚಿನ್ನಾಭರಣ ದೋಚಿದ್ದಾರೆ. ಬೀರು ಒಡೆದ ಶಬ್ಧ ಕೇಳಿ ಪಕ್ಕದ ಮನೆಯಲ್ಲಿ ವಾಸವಿದ್ದ ಸಂಬಂಧಿಕರು ಮನೆ ಬಳಿ ಬರುತ್ತಿದ್ದಂತೆ ಖದೀಮರು ಬ್ಯಾಗಿನಲ್ಲಿ ಹಣ ಹಾಗೂ ಚಿನ್ನಾಭರಣವನ್ನು ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಇದೇ ವೇಳೆ ಮೂವರು ಆರೋಪಿಗಳು ಚಿನ್ನ ಹಾಗೂ ಹಣದ ಸಮೇತ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಸಫಲವಾಗಿದ್ದಾರೆ.

ಜಾಮೀನಿಗೆ ಹಣ ಹೊಂದಿಸುವಾಗ ಸಿಕ್ಕಿಬಿದ್ದ !
ಹಾಸನದಲ್ಲಿ ವಿವಿಧ ಅಪರಾಧ ಕೃತ್ಯಗಳಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದ ಸಹಚರರನ್ನು ಬಿಡಿಸಿಕೊಳ್ಳಲು ಆರ್ಥಿಕ ಸಂಕಷ್ಟ ಎದುರಾಗಿತ್ತು. ಇದಕ್ಕೆ ದರೋಡೆಗೆ ಪ್ಲ್ಯಾನ್ ಮಾಡಿದ್ದ ತೇಜಸ್, ಹೊಸ ಹುಡುಗರ ತಂಡ ಕಟ್ಟಿದ್ದ. ಕದ್ದ ಚಿನ್ನಾಭರಣವನ್ನು ಮಾರಿ ಜಾಮೀನಿಗೆ ಹಣ ಹೊಂದಿಸಲು ಯೋಜನೆ ಹಾಕಿದ್ದ. ಆದರೆ ರಾಬರಿ ಮಾಡಿ ಪರಾರಿಯಾಗಿದ್ದ ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
Bengaluru Police Arrest Robbers Who Theft Old Man Gold and Amount.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am