ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm