ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm