ಬ್ರೇಕಿಂಗ್ ನ್ಯೂಸ್
13-09-21 11:21 am Headline Karnataka News Network ಕ್ರೈಂ
ಬೆಂಗಳೂರು, ಸೆ.13: ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ನನ್ನು ನಗರದ ಕೆಎಸ್ಎಫ್ಎ ಫುಟ್ಬಾಲ್ ಮೈದಾನದಲ್ಲಿ ಅಟ್ಟಾಡಿಸಿ ಕೊಂದಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
27 ವರ್ಷದ ಅರವಿಂದ್ ಕೊಲೆಯಾದ ರೌಡಿ ಶೀಟರ್. ಸಂಜೆ 4 ಗಂಟೆಯ ಸುಮಾರಿಗೆ ಫುಟ್ಬಾಲ್ ಮೈದಾನದೊಳಗೆ 4 ರಿಂದ 5 ಜನರ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿ ರೆಫರಿ ಕೋಣೆಯಲ್ಲಿ ಮರ್ಡರ್ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಪ ಪೊಲೀಸ್ ಆಯುಕ್ತ (ಕೇಂದ್ರ) ಅನುಚೇತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ ಅರವಿಂದ್ ಕೆಎಸ್ಎಫ್ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಪಂದ್ಯಾವಳಿಯಲ್ಲಿ ಆಡಲು ಬಂದಿದ್ದರು. ಸಂಜೆ 4 ಗಂಟೆ ಸುಮಾರಿಗೆ 4 ರಿಂದ 5 ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದು ಅರವಿಂದ್ನನ್ನು ಸುತ್ತು ವರೆದಿದ್ದಾರೆ. ನಂತರ ಆತ ಸ್ಥಳದಿಂದ ಪರಾರಿಯಾಗಿ ಕೆಎಸ್ಎಫ್ಎ ಫುಟ್ಬಾಲ್ ಕ್ರೀಡಾಂಗಣವನ್ನು ಪ್ರವೇಶಿಸಿ ರೆಫರಿಯ ಕೊಠಡಿಯೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಆದರೂ ಬಿಡದ ಆರೋಪಿಗಳು, ಬಾಗಿಲು ಮುರಿದು ಮಾರಕ ಆಯುಧಗಳನ್ನು ಬಳಸಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಗ್ಯಾಂಗ್ಗಳ ಮಧ್ಯೆ ಇದ್ದ ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಅರವಿಂದ್ ರೌಡಿ ಶೀಟರ್ ಆಗಿದ್ದಾನೆ ಹಾಗೂ ಕೆಲ ದಿನಗಳ ಹಿಂದೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ಎಂದು ಕೇಂದ್ರ ವಿಭಾಗದ ಡಿಸಿಪಿ ಮಾಹಿತಿ ನೀಡಿದರು.
ಅರವಿಂದ್ನನ್ನು ಮೈದಾನದಲ್ಲಿ ಅಟ್ಟಿಸಿಕೊಂಡು ಹೋಗುವುದನ್ನು ನೋಡಿ ಆಟಗಾರರು ಮತ್ತು ಪ್ರೇಕ್ಷಕರು ಆಘಾತಕ್ಕೆ ಒಳಗಿದ್ದಾರೆ. ಈ ಸಮಯದಲ್ಲಿರಾಜ್ಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿಯೇ ವಿಭಾಗೀಯ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಪಂದ್ಯದ ಆರಂಭಕ್ಕೂ ಕೆಲವೇ ನಿಮಿಷದ ಮೊದಲು ಕೊಲೆ ನಡೆದಿದೆ ಎಂದು ಅನುಚೇತ್ ತಿಳಿಸಿದರು.
A 27-year-old rowdy-sheeter, who also managed a football team, was hacked to death at a stadium in Bengaluru Sunday evening. Identifying the deceased as Aravind, sources in the police department said the incident took place around 4 pm when the assailants charged into the football ground and chased the youth before killing him in the referee room.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am