ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm