ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm