ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am