ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm