ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.

ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am