ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.

ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm