ಬ್ರೇಕಿಂಗ್ ನ್ಯೂಸ್
15-09-21 01:04 pm Mangaluru Correspondent ಕ್ರೈಂ
ಮಂಗಳೂರು, ಸೆ.15: ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಆಸ್ಕರ್ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಟ್ಟಿದ್ದ ವೇಳೆ ಕಳ್ಳರು ಪಿಕ್ ಪಾಕೆಟ್ ಮಾಡಿದ್ದಾರೆ. ಕಾಂಗ್ರೆಸ್ ಜಿಲ್ಲಾ ಮಟ್ಟದ ಮುಖಂಡರೊಬ್ಬರ ಪಾಕೆಟ್ ನಲ್ಲಿದ್ದ 30 ಸಾವಿರ ಹಣವನ್ನು ಎಗರಿಸಿದ್ದಾರೆ.
ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನ ಉಡುಪಿಯಿಂದ ತಂದು ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿತ್ತು. ಸಾರ್ವಜನಿಕರು ಮತ್ತು ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಇದೇ ವೇಳೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಮಟ್ಟು ಅವರ ಪ್ಯಾಂಟ್ ಜೇಬಿನಲ್ಲಿದ್ದ ಹಣದ ಗಂಟನ್ನು ಯಾರೋ ಎಗರಿಸಿದ್ದಾರೆ.



ಜನರ ರಶ್ ನಡುವೆ ಯಾರೋ ಚಾಲಾಕಿತನ ತೋರಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕಾಂಗ್ರೆಸ್ ಕಚೇರಿಯಲ್ಲಿ ಹೆಚ್ಚಿನವರು ಕಾರ್ಯಕರ್ತರೇ ಬಂದಿದ್ದು, ಈ ಪೈಕಿ ಯಾರು ಕಳ್ಳರಿದ್ದರು ಅನ್ನೋದ್ರ ಬಗ್ಗೆ ಕಚೇರಿ ಒಳಗಿದ್ದವರೇ ತಲೆಕೆಡಿಸಿಕೊಂಡಿದ್ದಾರೆ. ಧನಂಜಯ ಮಟ್ಟು ಅವರ ಪಾಕೆಟ್ ನಲ್ಲಿ ಹಣದ ಜೊತೆಗೆ ಇನ್ನಿತರ ದಾಖಲೆ ಪತ್ರಗಳು ಕೂಡ ಇದ್ದವು ಎನ್ನಲಾಗಿದ್ದು, ಹೀಗಾಗಿ ಕಳ್ಳನ ಕರಾಮತ್ತು ಬಗ್ಗೆ ತುಂಬ ಚಿಂತೆಗೆ ಒಳಗಾಗಿದ್ದಾರೆ.
ಮತ್ತೊಬ್ಬ ನಾಯಕರು ಹೇಳುವ ಪ್ರಕಾರ, ಇಬ್ಬರು ಹಣ ಕಳಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೊಬ್ಬ ಮುಖಂಡರ ಹತ್ತು ಸಾವಿರ ರೂ. ಕಳವಾಗಿದೆ ಎನ್ನುವ ಮಾಹಿತಿಯನ್ನು ನೀಡುತ್ತಿದ್ದಾರೆ. ಹೀಗಾಗಿ ಎಷ್ಟು ಮಂದಿ ಹಣ ಕಳಕೊಂಡಿದ್ದಾರೆ ಅನ್ನುವುದರ ಸರಿಯಾದ ವಿವರ ಸಿಗುತ್ತಿಲ್ಲ. ಈ ಬಗ್ಗೆ ಪೊಲೀಸ್ ದೂರನ್ನೂ ನೀಡಲಾಗಿಲ್ಲ.
Many Congress leaders have lost money by pickpocket during paying last respect to Oscar Fernandes death in Mangalore. Oscar Fernandes, a former Union minister and a senior Congress leader, passed away at a private hospital in Mangaluru. He was 80. Fernandes, a sitting Rajya Sabha MP, was undergoing treatment at a private hospital in Mangaluru after he suffered a fall while exercising. He is survived by his wife Blossom Fernandes and two children.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm