ಬ್ರೇಕಿಂಗ್ ನ್ಯೂಸ್
18-09-21 01:06 pm Headline Karnataka News Network ಕ್ರೈಂ
ಲಕ್ನೋ, ಸೆ.18 : ದೆಹಲಿ ಪೊಲೀಸರು ಉಗ್ರರ ಜಾಡು ಹಿಡಿದು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಮುಂಬೈ ಮತ್ತು ಅಲಹಾಬಾದ್ ನಲ್ಲಿ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ಹೈಮದ್ ಉರ್ ರೆಹ್ಮಾನ್ ಎಂಬಾತ ಪೊಲೀಸರಿಗೆ ಶರಣಾಗಿದ್ದರೆ, ಮುಂಬೈ ಪೊಲೀಸರು ದಾವೂದ್ ಕಂಪನಿಯ ಸಂಪರ್ಕದ ಹೊಂದಿದ್ದ ಝಕೀರ್ ಹುಸೇನ್ ಶೇಖ್ ಎಂಬಾತನನ್ನು ಬಂಧಿಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಪಾಕಿಸ್ಥಾನದ ಐಎಸ್ಐ ಲಿಂಕ್ ಆರೋಪದಲ್ಲಿ ಬಂಧಿತನಾಗಿದ್ದ ಜಾಮಿಯಾ ನಗರ್ ನಿವಾಸಿ ಒಸಾಮಾ ಸಮಿ(22) ಸೋದರ ಸಂಬಂಧಿಯಾಗಿರುವ ಹೈಮದ್ ಉರ್ ರೆಹ್ಮಾನ್ ಉಗ್ರರ ನಂಟಿನ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಶುಕ್ರವಾರ ಆತ ಪ್ರಯಾಗ್ ರಾಜ್ ಜಿಲ್ಲೆಯ ಕರೇಲಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.

ದೆಹಲಿ ವಿಶೇಷ ಪಡೆ ಪೊಲೀಸರು ಮತ್ತು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರು ಮಂದಿಯನ್ನು ಬಂಧಿಸಿದ್ದರು. ಪಾಕಿಸ್ಥಾನದ ಐಎಸ್ಐ ಸಂಪರ್ಕದಲ್ಲಿ ಈ ಆರು ಮಂದಿಯೂ ದೇಶದಲ್ಲಿ ಉಗ್ರವಾದಿ ಕೃತ್ಯಕ್ಕೆ ಮುಂದಾಗಿದ್ದರು. ಅದಕ್ಕಾಗಿ ಪಾಕಿಸ್ಥಾನದ ಕರಾಚಿಯಲ್ಲಿ ತರಬೇತಿಯನ್ನೂ ಪಡೆದಿದ್ದರು.
ಪೊಲೀಸರ ವಿಚಾರಣೆಯಲ್ಲಿ ಒಸಾಮಾ, ಮಸ್ಕತ್ ಮೂಲಕ ಪಾಕಿಸ್ಥಾನಕ್ಕೆ ತೆರಳಲು ತನ್ನ ಮಾವ ಹೈಮದ್ ಉರ್ ರೆಹ್ಮಾನ್ ನೆರವು ನೀಡಿದ್ದ. ಆತ ಪಾಕಿಸ್ಥಾನದ ಐಎಸ್ಐ ಜೊತೆಗೆ ನೇರ ಸಂಪರ್ಕದಲ್ಲಿದ್ದು, ಈ ವ್ಯವಸ್ಥೆಯನ್ನು ಮಾಡಿದ್ದ ಎಂದು ಮಾಹಿತಿ ನೀಡಿದ್ದ. ಅಲ್ಲದೆ, ಮಸ್ಕತ್, ಒಮಾನ್ ಮೂಲಕ ಪಾಕಿಸ್ಥಾನಕ್ಕೆ ಪ್ರಯಾಣಿಸಲು ಮಾವನೇ 5 ಲಕ್ಷ ರೂಪಾಯಿ ಫಂಡಿಂಗ್ ಮಾಡಿದ್ದ. ಭಾರತದಲ್ಲಿ 1993ರ ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ಮಾದರಿಯಲ್ಲೇ ವಿವಿಧ ನಗರಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ಮಾಡಲಾಗಿತ್ತು. ಅದಕ್ಕೆ ಬೇಕಾದ ಸ್ಫೋಟಕಗಳನ್ನು ಪಾಕಿಸ್ಥಾನದ ಐಎಸ್ಐ ನೀಡುವುದಾಗಿ ಹೇಳಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದ.
ಇದೇ ವೇಳೆ, ಬಂಧಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಉತ್ತರ ಪ್ರದೇಶ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳಲ್ಲಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರಾಯ್ ಬರೇಲಿಯಲ್ಲಿ ಜಾಮಿಲ್ ಖತ್ರಿ ಮತ್ತು ಪ್ರತಾಪಗಢದಲ್ಲಿ ಇಮ್ತಿಯಾಜ್ ಆಲಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ನಡುವೆ, ಹೈಮದ್ ಉರ್ ರೆಹ್ಮಾನನ್ನು ದೆಹಲಿ ಪೊಲೀಸರು ಲಕ್ನೋಗೆ ಬಂದು ಅಲ್ಲಿಂದ ತಮ್ಮ ವಶಕ್ಕೆ ಪಡೆದಿದ್ದಾರೆ.
Two terrorist networks have been busted in Mumbai and Prayagraj. ATS and Crime Branch are investigating the case. Watch the video to know another big revelation over funding of arrested terrorists.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm