ಬ್ರೇಕಿಂಗ್ ನ್ಯೂಸ್
18-09-21 01:06 pm Headline Karnataka News Network ಕ್ರೈಂ
ಲಕ್ನೋ, ಸೆ.18 : ದೆಹಲಿ ಪೊಲೀಸರು ಉಗ್ರರ ಜಾಡು ಹಿಡಿದು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಮುಂಬೈ ಮತ್ತು ಅಲಹಾಬಾದ್ ನಲ್ಲಿ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ಹೈಮದ್ ಉರ್ ರೆಹ್ಮಾನ್ ಎಂಬಾತ ಪೊಲೀಸರಿಗೆ ಶರಣಾಗಿದ್ದರೆ, ಮುಂಬೈ ಪೊಲೀಸರು ದಾವೂದ್ ಕಂಪನಿಯ ಸಂಪರ್ಕದ ಹೊಂದಿದ್ದ ಝಕೀರ್ ಹುಸೇನ್ ಶೇಖ್ ಎಂಬಾತನನ್ನು ಬಂಧಿಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಪಾಕಿಸ್ಥಾನದ ಐಎಸ್ಐ ಲಿಂಕ್ ಆರೋಪದಲ್ಲಿ ಬಂಧಿತನಾಗಿದ್ದ ಜಾಮಿಯಾ ನಗರ್ ನಿವಾಸಿ ಒಸಾಮಾ ಸಮಿ(22) ಸೋದರ ಸಂಬಂಧಿಯಾಗಿರುವ ಹೈಮದ್ ಉರ್ ರೆಹ್ಮಾನ್ ಉಗ್ರರ ನಂಟಿನ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಶುಕ್ರವಾರ ಆತ ಪ್ರಯಾಗ್ ರಾಜ್ ಜಿಲ್ಲೆಯ ಕರೇಲಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.
ದೆಹಲಿ ವಿಶೇಷ ಪಡೆ ಪೊಲೀಸರು ಮತ್ತು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರು ಮಂದಿಯನ್ನು ಬಂಧಿಸಿದ್ದರು. ಪಾಕಿಸ್ಥಾನದ ಐಎಸ್ಐ ಸಂಪರ್ಕದಲ್ಲಿ ಈ ಆರು ಮಂದಿಯೂ ದೇಶದಲ್ಲಿ ಉಗ್ರವಾದಿ ಕೃತ್ಯಕ್ಕೆ ಮುಂದಾಗಿದ್ದರು. ಅದಕ್ಕಾಗಿ ಪಾಕಿಸ್ಥಾನದ ಕರಾಚಿಯಲ್ಲಿ ತರಬೇತಿಯನ್ನೂ ಪಡೆದಿದ್ದರು.
ಪೊಲೀಸರ ವಿಚಾರಣೆಯಲ್ಲಿ ಒಸಾಮಾ, ಮಸ್ಕತ್ ಮೂಲಕ ಪಾಕಿಸ್ಥಾನಕ್ಕೆ ತೆರಳಲು ತನ್ನ ಮಾವ ಹೈಮದ್ ಉರ್ ರೆಹ್ಮಾನ್ ನೆರವು ನೀಡಿದ್ದ. ಆತ ಪಾಕಿಸ್ಥಾನದ ಐಎಸ್ಐ ಜೊತೆಗೆ ನೇರ ಸಂಪರ್ಕದಲ್ಲಿದ್ದು, ಈ ವ್ಯವಸ್ಥೆಯನ್ನು ಮಾಡಿದ್ದ ಎಂದು ಮಾಹಿತಿ ನೀಡಿದ್ದ. ಅಲ್ಲದೆ, ಮಸ್ಕತ್, ಒಮಾನ್ ಮೂಲಕ ಪಾಕಿಸ್ಥಾನಕ್ಕೆ ಪ್ರಯಾಣಿಸಲು ಮಾವನೇ 5 ಲಕ್ಷ ರೂಪಾಯಿ ಫಂಡಿಂಗ್ ಮಾಡಿದ್ದ. ಭಾರತದಲ್ಲಿ 1993ರ ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ಮಾದರಿಯಲ್ಲೇ ವಿವಿಧ ನಗರಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ಮಾಡಲಾಗಿತ್ತು. ಅದಕ್ಕೆ ಬೇಕಾದ ಸ್ಫೋಟಕಗಳನ್ನು ಪಾಕಿಸ್ಥಾನದ ಐಎಸ್ಐ ನೀಡುವುದಾಗಿ ಹೇಳಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದ.
ಇದೇ ವೇಳೆ, ಬಂಧಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಉತ್ತರ ಪ್ರದೇಶ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳಲ್ಲಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರಾಯ್ ಬರೇಲಿಯಲ್ಲಿ ಜಾಮಿಲ್ ಖತ್ರಿ ಮತ್ತು ಪ್ರತಾಪಗಢದಲ್ಲಿ ಇಮ್ತಿಯಾಜ್ ಆಲಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ನಡುವೆ, ಹೈಮದ್ ಉರ್ ರೆಹ್ಮಾನನ್ನು ದೆಹಲಿ ಪೊಲೀಸರು ಲಕ್ನೋಗೆ ಬಂದು ಅಲ್ಲಿಂದ ತಮ್ಮ ವಶಕ್ಕೆ ಪಡೆದಿದ್ದಾರೆ.
Two terrorist networks have been busted in Mumbai and Prayagraj. ATS and Crime Branch are investigating the case. Watch the video to know another big revelation over funding of arrested terrorists.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am