ಬ್ರೇಕಿಂಗ್ ನ್ಯೂಸ್
18-09-21 01:33 pm Mangaluru Correspondent ಕ್ರೈಂ
ಕೊಣಾಜೆ, ಸೆ.18: ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿ ಕ್ರಾಸ್ ನಲ್ಲಿ ಮರಿಕ್ಕಳ ಕಸಾಯಿಖಾನೆಗೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದರೂ, ಓರ್ವನ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದ್ದು ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಕೊಣಾಜೆ ಪೊಲೀಸರು ಬಜರಂಗದಳ ನೀಡಿದ್ದ ಮಾಹಿತಿಯಂತೆ ಪೂಪಾಡಿ ಕ್ರಾಸ್ ನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಸಮೇತ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದರು. ಈ ಬಗ್ಗೆ ಠಾಣೆಗೆ ಫೋನ್ ಮಾಡಿ ವಿಚಾರಿಸಿದಾಗ, ಪ್ರತಿಕ್ರಿಯಿಸಿದ ಪೊಲೀಸ್ ಸಿಬ್ಬಂದಿ, ಪಿಕ್ ಅಪ್ ವಾಹನ, ಹಸುಗಳನ್ನ ವಶಕ್ಕೆ ಪಡೆದಿದ್ದೇವೆ FIR ಇನ್ನೂ ಆಗಿಲ್ಲ. ಪಿಕ್ ಅಪ್ ನಲ್ಲಿ ಸಾಗಿಸುತ್ತಿದ್ದ ಹಸುಗಳನ್ನ ಸ್ಥಳೀಯ ಕೃಷಿಕರೋರ್ವರು ಹಾಲು ಉತ್ಪಾದಕ ಸಂಘದಿಂದ ಖರೀದಿಸಿದ್ದೆಂದು ಹೇಳುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದಿದ್ದರು. ಆದರೆ ಸಂಜೆ ವೇಳೆ, ಕೊಣಾಜೆ ಠಾಣೆಯಲ್ಲಿ ಕೊಳ್ನಾಡು ನಿವಾಸಿ ಅಬ್ದುಲ್ ರಝಾಕ್ ಎಂಬಾತನ ವಿರುದ್ಧ ಮಾತ್ರ ಪ್ರಕರಣ ದಾಖಲಾಗಿತ್ತು.


ಪೊಲೀಸರು ಇಬ್ಬರನ್ನ ವಶಕ್ಕೆ ತೆಗೆದಿದ್ದು, ಮತ್ತೋರ್ವ ಆರೋಪಿಯನ್ನ ಪ್ರಕರಣದಿಂದ ಕೈ ಬಿಟ್ಟದ್ದೇಕೆಂದು ಬಜರಂಗದಳದ ಜಿಲ್ಲಾ ಗೋರಕ್ಷಾ ಪ್ರಮುಖರಾದ ಪವಿತ್ರ ಕೆರೆಬೈಲ್ ಪ್ರಶ್ನಿಸಿದ್ದಾರೆ. ಕಾಣದ ಕೈಗಳ ಪ್ರಭಾವದಿಂದ ಪೊಲೀಸರು ದನಕಳ್ಳತನದ ಆರೋಪಿಯನ್ನ ಕೇಸು ದಾಖಲಿಸದೆ ಬಿಟ್ಟದ್ದು ಅಕ್ಷಮ್ಯವಾಗಿದ್ದು ಇದನ್ನ ವಿಶ್ವಹಿಂದೂ ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲದೆ ಈ ವಿಚಾರವನ್ನ ನಗರ ಪೊಲೀಸ್ ಕಮಿಷನರ್ ಗಮನಕ್ಕೂ ತರುವುದಾಗಿ ಪವಿತ್ರ ಕೆರೆಬೈಲ್ ಹೇಳಿದ್ದಾರೆ.
ಕರ್ನಾಟಕ - ಕೇರಳದ ಗಡಿಭಾಗವಾಗಿರುವ ಮರಿಕ್ಕಳದಲ್ಲಿ ಅಕ್ರಮ ಕಸಾಯಿಖಾನೆಯಿದ್ದು ನಿರಂತರವಾಗಿ ಗೋವುಗಳನ್ನ ಸುಳ್ಳು ದಾಖಲೆ ಸೃಷ್ಟಿಸಿ ಸಾಗಿಸುತ್ತಿರುವುದು ತಿಳಿದು ಬಂದಿದೆ. ಅದರ ಮಾಹಿತಿಯನ್ನೇ ಕೊಣಾಜೆ ಪೊಲೀಸರಿಗೆ ಮೊನ್ನೆ ನಮ್ಮ ಕಾರ್ಯಕರ್ತರು ನೀಡಿದ್ದು , ಪೊಲೀಸರು ವಶಕ್ಕೆ ಪಡೆದ ಆರೋಪಿಯನ್ನ ಬಿಟ್ಟು ಕಳಿಸಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಪವಿತ್ರ ಕೆರೆಬೈಲ್ ಆರೋಪಿಸಿದ್ದಾರೆ.
Mangalore Pickup van held for cattle trafficking in Mudipu Case turns into controversy after Konaje Police have left the prime accused. The Bajrang dal members have alleged and condemned the act of Konaje Police.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am