ಬ್ರೇಕಿಂಗ್ ನ್ಯೂಸ್
19-09-21 01:52 pm Mangaluru Correspondent ಕ್ರೈಂ
Photo credits : Representational
ಪಡುಬಿದ್ರಿ, ಸೆ.19 : ಮಂಗಳೂರು- ಮುಂಬಯಿ ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಮುಂದುವರಿದಿದ್ದು, ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿ ಸುಚಿತಾ ಕುಸುಮಾಕರ್ ಶೆಟ್ಟಿಯವರ ಬೆಲೆ ಬಾಳುವ ಮೊಬೈಲ್ ಸಹಿತ ನಗದು ಇದ್ದ ಪರ್ಸ್ ಅನ್ನು ಸೆ.16 ರ ರಾತ್ರಿ ಕಳವು ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.
ಪರ್ಸ್ನಲ್ಲಿ 75 ಸಾವಿರ ರೂ. ಮೌಲ್ಯದ ಮೊಬೈಲ್, 12 ಸಾವಿರ ರೂ. ನಗದು ಇನ್ನಿತರ ವಸ್ತುಗಳಿದ್ದವು. ಸುಚಿತಾ ಅವರು ಬೆಲೆ ಬಾಳುವ ವಜ್ರ ಮತ್ತು ಚಿನ್ನಾಭರಣಗಳನ್ನು ಸೀಟ್ನಡಿ ಇರಿಸಿದ್ದ ಬ್ಯಾಗ್ನಲ್ಲಿಟ್ಟಿದ್ದರು. ಹಾಗಾಗಿ ಅವುಗಳು ಕಳವಾಗಿಲ್ಲ. ಮುಂಬೈ ಬಂಟರ ಸಂಘದ ನಗರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕುಸುಮಾಕರ್ ಶೆಟ್ಟಿ ಮುಂಬಯಿಗೆ ತೆರಳಲು ಉಡುಪಿಯಲ್ಲಿ ಮತ್ಸ್ಯ ಗಂಧ ರೈಲು ಹತ್ತಿದ್ದರು. ರೈಲಿನ ಎಸಿ ಕೋಚ್ನಲ್ಲಿ ಸಹೋದರಿಯೊಂದಿಗೆ ಪ್ರಯಾಣ ಬೆಳೆಸಿದ್ದರು.

ಉಡುಪಿಯಿಂದ ಹೊರಟ ರೈಲು ತಡರಾತ್ರಿ ಪನ್ವೇಲ್ ಸಮೀಪದ ರೋಹಾ - ನಾಗೋಥಾಣೆಗೆ ತಲುಪಿದ್ದಾಗ ಸುಚಿತಾರಿಗೆ ನಿದ್ದೆ ಆವರಿಸಿದ್ದು ಮುಂಜಾನೆ 3.40ರ ವೇಳೆ ತಲೆದಿಂಬಿನಡಿ ಇಟ್ಟಿದ್ದ ಪರ್ಸ್ನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. ಕಂಪಾರ್ಟ್ಮೆಂಟಿನ ಕೊನೆಯ ಸೀಟ್ ನಲ್ಲಿ ಮಲಗಿದ್ದ ಕಾರಣ ಪರ್ಸ್ ಎಳೆದು ಬಾಗಿಲಿನ ಮೂಲಕ ಓಡಿ ಹೋಗಿದ್ದಾನೆ. ಈ ಸಂದರ್ಭ ಅವರು ಬೊಬ್ಬಿಟ್ಟರೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.
ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಪ್ರಕಾರ, ಮುಂಬೈಯಿಂದ ಮಂಗಳೂರಿಗೆ ಬರುವ ಮತ್ಸ್ಯ ಗಂಧ ರೈಲಿನಲ್ಲಿ ಎರಡು ಕುಖ್ಯಾತ ಕಳ್ಳರ ತಂಡಗಳು ನಿರಂತರ ಕಳವು ಕೃತ್ಯದಲ್ಲಿ ತೊಡಗಿವೆ. ಆದರೆ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ.
Udupi Robbery in Matsyagandha train Man robbed of 75 Thousand. The railway police are showing negligence it is said in this case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm