ಬ್ರೇಕಿಂಗ್ ನ್ಯೂಸ್
19-09-21 01:52 pm Mangaluru Correspondent ಕ್ರೈಂ
Photo credits : Representational
ಪಡುಬಿದ್ರಿ, ಸೆ.19 : ಮಂಗಳೂರು- ಮುಂಬಯಿ ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಮುಂದುವರಿದಿದ್ದು, ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿ ಸುಚಿತಾ ಕುಸುಮಾಕರ್ ಶೆಟ್ಟಿಯವರ ಬೆಲೆ ಬಾಳುವ ಮೊಬೈಲ್ ಸಹಿತ ನಗದು ಇದ್ದ ಪರ್ಸ್ ಅನ್ನು ಸೆ.16 ರ ರಾತ್ರಿ ಕಳವು ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.
ಪರ್ಸ್ನಲ್ಲಿ 75 ಸಾವಿರ ರೂ. ಮೌಲ್ಯದ ಮೊಬೈಲ್, 12 ಸಾವಿರ ರೂ. ನಗದು ಇನ್ನಿತರ ವಸ್ತುಗಳಿದ್ದವು. ಸುಚಿತಾ ಅವರು ಬೆಲೆ ಬಾಳುವ ವಜ್ರ ಮತ್ತು ಚಿನ್ನಾಭರಣಗಳನ್ನು ಸೀಟ್ನಡಿ ಇರಿಸಿದ್ದ ಬ್ಯಾಗ್ನಲ್ಲಿಟ್ಟಿದ್ದರು. ಹಾಗಾಗಿ ಅವುಗಳು ಕಳವಾಗಿಲ್ಲ. ಮುಂಬೈ ಬಂಟರ ಸಂಘದ ನಗರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕುಸುಮಾಕರ್ ಶೆಟ್ಟಿ ಮುಂಬಯಿಗೆ ತೆರಳಲು ಉಡುಪಿಯಲ್ಲಿ ಮತ್ಸ್ಯ ಗಂಧ ರೈಲು ಹತ್ತಿದ್ದರು. ರೈಲಿನ ಎಸಿ ಕೋಚ್ನಲ್ಲಿ ಸಹೋದರಿಯೊಂದಿಗೆ ಪ್ರಯಾಣ ಬೆಳೆಸಿದ್ದರು.

ಉಡುಪಿಯಿಂದ ಹೊರಟ ರೈಲು ತಡರಾತ್ರಿ ಪನ್ವೇಲ್ ಸಮೀಪದ ರೋಹಾ - ನಾಗೋಥಾಣೆಗೆ ತಲುಪಿದ್ದಾಗ ಸುಚಿತಾರಿಗೆ ನಿದ್ದೆ ಆವರಿಸಿದ್ದು ಮುಂಜಾನೆ 3.40ರ ವೇಳೆ ತಲೆದಿಂಬಿನಡಿ ಇಟ್ಟಿದ್ದ ಪರ್ಸ್ನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. ಕಂಪಾರ್ಟ್ಮೆಂಟಿನ ಕೊನೆಯ ಸೀಟ್ ನಲ್ಲಿ ಮಲಗಿದ್ದ ಕಾರಣ ಪರ್ಸ್ ಎಳೆದು ಬಾಗಿಲಿನ ಮೂಲಕ ಓಡಿ ಹೋಗಿದ್ದಾನೆ. ಈ ಸಂದರ್ಭ ಅವರು ಬೊಬ್ಬಿಟ್ಟರೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.
ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಪ್ರಕಾರ, ಮುಂಬೈಯಿಂದ ಮಂಗಳೂರಿಗೆ ಬರುವ ಮತ್ಸ್ಯ ಗಂಧ ರೈಲಿನಲ್ಲಿ ಎರಡು ಕುಖ್ಯಾತ ಕಳ್ಳರ ತಂಡಗಳು ನಿರಂತರ ಕಳವು ಕೃತ್ಯದಲ್ಲಿ ತೊಡಗಿವೆ. ಆದರೆ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ.
Udupi Robbery in Matsyagandha train Man robbed of 75 Thousand. The railway police are showing negligence it is said in this case.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am