ಬ್ರೇಕಿಂಗ್ ನ್ಯೂಸ್
19-09-21 01:52 pm Mangaluru Correspondent ಕ್ರೈಂ
Photo credits : Representational
ಪಡುಬಿದ್ರಿ, ಸೆ.19 : ಮಂಗಳೂರು- ಮುಂಬಯಿ ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಮುಂದುವರಿದಿದ್ದು, ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿ ಸುಚಿತಾ ಕುಸುಮಾಕರ್ ಶೆಟ್ಟಿಯವರ ಬೆಲೆ ಬಾಳುವ ಮೊಬೈಲ್ ಸಹಿತ ನಗದು ಇದ್ದ ಪರ್ಸ್ ಅನ್ನು ಸೆ.16 ರ ರಾತ್ರಿ ಕಳವು ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.
ಪರ್ಸ್ನಲ್ಲಿ 75 ಸಾವಿರ ರೂ. ಮೌಲ್ಯದ ಮೊಬೈಲ್, 12 ಸಾವಿರ ರೂ. ನಗದು ಇನ್ನಿತರ ವಸ್ತುಗಳಿದ್ದವು. ಸುಚಿತಾ ಅವರು ಬೆಲೆ ಬಾಳುವ ವಜ್ರ ಮತ್ತು ಚಿನ್ನಾಭರಣಗಳನ್ನು ಸೀಟ್ನಡಿ ಇರಿಸಿದ್ದ ಬ್ಯಾಗ್ನಲ್ಲಿಟ್ಟಿದ್ದರು. ಹಾಗಾಗಿ ಅವುಗಳು ಕಳವಾಗಿಲ್ಲ. ಮುಂಬೈ ಬಂಟರ ಸಂಘದ ನಗರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕುಸುಮಾಕರ್ ಶೆಟ್ಟಿ ಮುಂಬಯಿಗೆ ತೆರಳಲು ಉಡುಪಿಯಲ್ಲಿ ಮತ್ಸ್ಯ ಗಂಧ ರೈಲು ಹತ್ತಿದ್ದರು. ರೈಲಿನ ಎಸಿ ಕೋಚ್ನಲ್ಲಿ ಸಹೋದರಿಯೊಂದಿಗೆ ಪ್ರಯಾಣ ಬೆಳೆಸಿದ್ದರು.

ಉಡುಪಿಯಿಂದ ಹೊರಟ ರೈಲು ತಡರಾತ್ರಿ ಪನ್ವೇಲ್ ಸಮೀಪದ ರೋಹಾ - ನಾಗೋಥಾಣೆಗೆ ತಲುಪಿದ್ದಾಗ ಸುಚಿತಾರಿಗೆ ನಿದ್ದೆ ಆವರಿಸಿದ್ದು ಮುಂಜಾನೆ 3.40ರ ವೇಳೆ ತಲೆದಿಂಬಿನಡಿ ಇಟ್ಟಿದ್ದ ಪರ್ಸ್ನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. ಕಂಪಾರ್ಟ್ಮೆಂಟಿನ ಕೊನೆಯ ಸೀಟ್ ನಲ್ಲಿ ಮಲಗಿದ್ದ ಕಾರಣ ಪರ್ಸ್ ಎಳೆದು ಬಾಗಿಲಿನ ಮೂಲಕ ಓಡಿ ಹೋಗಿದ್ದಾನೆ. ಈ ಸಂದರ್ಭ ಅವರು ಬೊಬ್ಬಿಟ್ಟರೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.
ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಪ್ರಕಾರ, ಮುಂಬೈಯಿಂದ ಮಂಗಳೂರಿಗೆ ಬರುವ ಮತ್ಸ್ಯ ಗಂಧ ರೈಲಿನಲ್ಲಿ ಎರಡು ಕುಖ್ಯಾತ ಕಳ್ಳರ ತಂಡಗಳು ನಿರಂತರ ಕಳವು ಕೃತ್ಯದಲ್ಲಿ ತೊಡಗಿವೆ. ಆದರೆ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ.
Udupi Robbery in Matsyagandha train Man robbed of 75 Thousand. The railway police are showing negligence it is said in this case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am