ಬ್ರೇಕಿಂಗ್ ನ್ಯೂಸ್
20-09-21 01:07 pm Headline Karnataka News Network ಕ್ರೈಂ
ಕಾಸರಗೋಡು, ಸೆ.20: ಎಂಟನೇ ಕ್ಲಾಸ್ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎನ್ನಲಾದ ಅಡೂರು ಮೂಲದ ಶಿಕ್ಷಕನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಉಸ್ಮಾನ್ (25) ಬಂಧಿತ ಆರೋಪಿ.
ಅದೇ ಶಾಲೆಯ ಎಂಟಲೇ ಕ್ಲಾಸ್ ವಿದ್ಯಾರ್ಥಿನಿ ಸೆ.8ರಂದು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆನಂತರ, ಈಕೆಯ ಸಾವಿಗೆ ಶಿಕ್ಷಕನ ಕಿರುಕುಳ ಕಾರಣ ಎನ್ನುವ ಆರೋಪ ಕೇಳಿಬಂದಿದ್ದು ಪೊಲೀಸರು ಪೋಕ್ಸೋ ಕಾಯ್ದೆಯಡಿ ಮತ್ತು ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿದ್ದರು. ಕೇಸು ದಾಖಲಾಗುತ್ತಲೇ ಆರೋಪಿ ಉಸ್ಮಾನ್ ನಾಪತ್ತೆಯಾಗಿದ್ದ. ಪೊಲೀಸರು ಮೊಬೈಲ್ ಟ್ರೇಸ್ ಮಾಡಿದಾಗ, ಮುಂಬೈನಲ್ಲಿರುವುದು ಗೊತ್ತಾಗಿ ಅಲ್ಲಿಗೆ ತೆರಳಿದ ಸ್ಪೆಷಲ್ ಬ್ರಾಂಚ್ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.
ವಿದ್ಯಾರ್ಥಿನಿಯ ಜೊತೆಗೆ ಶಿಕ್ಷಕ ಉಸ್ಮಾನ್ ಸಂಭಾಷಣೆ ನಡೆಸುತ್ತಿದ್ದ ಆಡಿಯೋ ಮೆಸೇಜ್ ಮತ್ತು ಇನ್ನಿತರ ಸಂದೇಶಗಳು ಜಾಲತಾಣದಲ್ಲಿ ಲೀಕ್ ಆಗಿದ್ದು ವಿದ್ಯಾರ್ಥಿನಿಗೆ ಮುಜುಗರ ಸೃಷ್ಟಿಸಿತ್ತು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರಿಂದ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದಿದ್ದಳು. ವಿಚಾರಣೆ ವೇಳೆ ಆರೋಪಿ ಉಸ್ಮಾನ್, ವಿದ್ಯಾರ್ಥಿನಿಯ ಜೊತೆ ಆಡಿಯೋ ಮೆಸೇಜ್ ಮಾಡುತ್ತಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಗಿ ತಿಳಿದುಬಂದೆ. ಅಲ್ಲದೆ, ಅಪ್ರಾಪ್ತ ಬಾಲಕಿಗೆ ಕಾಮುಕ ಶಿಕ್ಷಕನೇ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಇದರಿಂದ ತೀವ್ರ ಆಘಾತಕ್ಕೀಡಾಗಿದ್ದ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಳು. ಹುಡುಗಿಯ ಮೊಬೈಲ್ ಫೋನ್ ಮತ್ತು ಯುವಕನ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ
The police here on Sunday September 19 arrested a male teacher in connection with the alleged suicide of an eighth standard female student. The arrested man has been identified as A Usman (25), a teacher at a private school in Melparamba here. He is a resident of Adoor.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am