ಬ್ರೇಕಿಂಗ್ ನ್ಯೂಸ್
20-09-21 02:54 pm Mangaluru Correspondent ಕ್ರೈಂ
ಮಂಗಳೂರು, ಸೆ.20: ನಗರದ ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಕಚೇರಿಗೆ ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಮೂವರು ಸಿಬಂದಿಗೆ ಕತ್ತಿಯಿಂದ ಕಡಿದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ತಾನು ಇಲ್ಲಿನ ಹಳೆ ವಿದ್ಯಾರ್ಥಿ ಎಂದು ಹೇಳಿಕೊಂಡಿದ್ದಾನೆ. ಬಳಿಕ ಯಾರೋ ಸ್ಟಾಫ್ ಒಬ್ಬರನ್ನು ಕೇಳಿದ್ದು ಅವರು ಈಗ ಇಲ್ಲ ಎಂದು ಸಿಬಂದಿ ಪ್ರತಿಕ್ರಿಯಿಸಿದ್ದಾರೆ. ಅವರಿಗೊಂದು ಗಿಫ್ಟ್ ಕೊಡಲಿಕ್ಕಿದೆ ಎಂದು ಹೇಳುತ್ತಾ ಹರಿತ ಕತ್ತಿ ಹೊರ ತೆಗೆದಿದ್ದು ಅಲ್ಲಿದ್ದವರ ಮೇಲೆ ಬೀಸಿದ್ದಾನೆ. ಮೂವರು ಸಿಬಂದಿ ಕತ್ತಿಯೇಟಿನಿಂ ಗಾಯಗೊಂಡಿದ್ದಾರೆ.







ಸ್ಟೆನೋ ಗ್ರಾಫರ್ ಆಗಿರುವ ನಿರ್ಮಲಾ (43) ತಲೆ ಮತ್ತು ಕೈಗೆ ಗಂಭೀರ ಗಾಯಗೊಂಡಿದ್ದಾರೆ. ಪ್ರಥಮ ದರ್ಜೆ ಸಹಾಯಕಿ ಆಗಿರುವ ರೀನಾ ರಾಯ್(45) ಮತ್ತು ಅಟೆಂಡರ್ ಗುಣವತಿ (58) ಅವರಿಗೂ ಕತ್ತಿಯೇಟು ಬಿದ್ದಿದ್ದು ತಲೆ, ಕೈ, ಬೆನ್ನಿಗೆ ಕಡಿದ ಗಾಯಕ್ಕೀಡಾಗಿದ್ದಾರೆ. ಕತ್ತಿ ತೆಗೆದು ಬೀಸಿದ್ದನ್ನು ನೋಡಿದ ಮಹಿಳಾ ಸಿಬಂದಿಯೊಬ್ಬರು ಹೊರಗೆ ಬಂದಿದ್ದು ಕಟ್ಟಡದ ಹೊರಗೆ ಇದ್ದ ಜೈಲು ಸೆಕ್ಯುರಿಟಿಗೆ ತಿಳಿಸಿದ್ದಾರೆ. ಕೂಡಲೇ ಆ ಸಿಬಂದಿ ತಮ್ಮ ಜೈಲು ಸಿಬಂದಿ ಪೊಲೀಸರನ್ನು ಕರೆದಿದ್ದು ಅಲ್ಲಿಗೆ ತೆರಳುವಷ್ಟರಲ್ಲಿ ಮೂವರಿಗೆ ಹಲ್ಲೆ ಮಾಡಿ, ಚೇರ್ ಒಂದರಲ್ಲಿ ಕತ್ತಿ ಹಿಡಿದು ಕುಳಿತಿದ್ದ.
ಬಳಿಕ ಪೊಲೀಸರು ಆಗಂತುಕ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಕಮಿಷನರ್ ಶಶಿಕುಮಾರ್, ಜಿಪಂ ಸಿಇಓ ಕುಮಾರ್, ಡಿಡಿಪಿಐ ಸೇರಿದಂತೆ ಅಧಿಕಾರಿಗಳು ವಿಷಯ ತಿಳಿದು ದೌಡಾಯಿಸಿ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಆರೋಪಿ 35 ವರ್ಷದ ಯುವಕನಾಗಿದ್ದು ಯಾಕಾಗಿ ಈ ಕೃತ್ಯ ನಡೆಸಿದ್ದಾನೆ. ಆತನ ಉದ್ದೇಶ ಏನಿತ್ತು ಎಂಬುದನ್ನು ತನಿಖೆ ನಡೆಸಬೇಕಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಗಾಯಾಳು ಮೂವರು ಸಿಬಂದಿಯನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಗತ್ಯ ಚಿಕಿತ್ಸೆ ನೀಡಲಾಗುವುದು. ಸದ್ಯಕ್ಕೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಪಂ ಸಿಇಓ ಕುಮಾರ್ ತಿಳಿಸಿದ್ದಾರೆ. ಯುವಕನ ಕೃತ್ಯದಿಂದ ಅಲ್ಲಿನ ಇತರ ಸಿಬಂದಿ ಭಯಭೀತರಾಗಿದ್ದಾರೆ.
Video:
Miscrent attacks three woman staffs of DIET institute, District Institute of education and training brutally in Mangalore inside their office using knife. The The accused has been arrested by police and has been Interrogated by police. The incident took place in broad daylight inside their office.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm