ಬ್ರೇಕಿಂಗ್ ನ್ಯೂಸ್
21-09-21 12:19 pm Mangaluru Correspondent ಕ್ರೈಂ
ಕೊಣಾಜೆ, ಸೆ.21: ಕರ್ನಾಟಕ- ಕೇರಳ ಗಡಿಭಾಗದ ಮರಿಕ್ಕಳ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ದನಗಳನ್ನ ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳಲ್ಲಿ ಓರ್ವನನ್ನ ಬಂಧಿಸಿದ್ದರು. ಇದೀಗ ಬಜರಂಗದಳ ಕಾರ್ಯಕರ್ತರ ಆಗ್ರಹದ ಮೇರೆಗೆ ಮತ್ತೋರ್ವನನ್ನೂ ಬಂಧಿಸಿದ್ದು ಕಣ್ಣಮುಚ್ಚಾಲೆ ಆಟವನ್ನು ಕೊನೆಗೊಳಿಸಿದ್ದಾರೆ.
ಮಹಮ್ಮದ್ ಶಾಹಿದ್ ಮತ್ತೋರ್ವ ಬಂಧಿತ ಆರೋಪಿ. ಕಳೆದ ಗುರುವಾರ ಬೆಳಗ್ಗೆ ಬಜರಂಗದಳದ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ಮುಡಿಪು ಪೂಪಾಡಿ ಕಲ್ಲು ಕ್ರಾಸ್ ಬಳಿ ಕಸಾಯಿ ಖಾನೆಗೆ ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಎರಡು ಹಸುಗಳನ್ನ ವಶಕ್ಕೆ ಪಡೆದಿದ್ದರು. ಅಲ್ಲದೆ ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿದ್ದರು. ಆದರೆ ಎಫ್ಐಆರ್ ನಲ್ಲಿ ಕೇವಲ ಓರ್ವ ಆರೋಪಿಯ ವಿರುದ್ಧ ಮಾತ್ರ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಸ್ಥಳೀಯ ಪ್ರಭಾವಿ ಬಿಜೆಪಿ ಮುಖಂಡನಿಗೆ ಮಣಿದ ಕೊಣಾಜೆ ಪೊಲೀಸರು ಮತ್ತೋರ್ವ ಆರೋಪಿಯನ್ನ ಬಚಾವ್ ಮಾಡಿರುವ ಬಗ್ಗೆ ಬಜರಂಗದಳ ಆರೋಪಿಸಿತ್ತು. ಅಲ್ಲದೆ ತಪ್ಪಿಸಿಕೊಂಡ ಇನ್ನೋರ್ವ ಆರೋಪಿಯ ಬಂಧನಕ್ಕೆ ಬಜರಂಗದಳ ಆಗ್ರಹಿಸಿತ್ತು. ಬಜರಂಗಿಗಳ ಆಗ್ರಹಕ್ಕೆ ಮಣಿದ ಕೊಣಾಜೆ ಪೊಲೀಸರು ಇದೀಗ ಮತ್ತೋರ್ವ ಆರೋಪಿ ಮಹಮ್ಮದ್ ಶಾಹಿದ್ ನನ್ನ ಬಂಧಿಸಿದ್ದಾರೆ.


ಮಾಹಿತಿ ನೀಡದ ಕೊಣಾಜೆ ಪೊಲೀಸರು
ದನ ಕಳ್ಳತನದ ಮತ್ತೋರ್ವ ಬಂಧಿತ ಆರೋಪಿಯ ಹೆಸರು ಮಹಮ್ಮದ್ ಶಾಹಿದ್ ಎಂದು ನಿನ್ನೆ ಕೊಣಾಜೆ ಪಿಐ ಪ್ರಕಾಶ್ ದೇವಾಡಿಗರು ಹೇಳಿದ್ದು ಬಂಧಿತನ ವಿಳಾಸವನ್ನ ಠಾಣೆಗೆ ಕರೆ ಮಾಡಿ ಕೇಳುವಂತೆ ಹೇಳಿದ್ದರು. ಠಾಣೆಗೆ ವಿವಿಧ ಮಾಧ್ಯಮದ ಮಂದಿ ಪೋನಾಯಿಸಿ ಕೇಳಿದರೂ ಪ್ರತಿಕ್ರಿಯಿಸಿದ ಮಹಿಳಾ ಸಿಬ್ಬಂದಿ, ನಮಗೆ ಅದರ ಬಗ್ಗೆ ಮಾಹಿತಿಯೇ ಇಲ್ಲ ಎಂಬ ಉಡಾಫೆಯ ಉತ್ತರ ನೀಡುತ್ತಿದ್ದಾರೆ. ದನ ಕಳ್ಳತನದಂತಹ ಮಾಮೂಲಿ ಸುದ್ದಿಗಳ ಬಗ್ಗೆಯೂ ಮಾಧ್ಯಮ ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ಕೇಳುವ ಪರಿಸ್ಥಿತಿಯನ್ನ ಕೊಣಾಜೆ ಠಾಣೆ ಪೊಲೀಸರು ಸೃಷ್ಟಿಸಿದ್ದಾರೆ.
ಪೊಲೀಸರು ವಶಕ್ಕೆ ಪಡೆದಿದ್ದ ಎರಡು ಹಸುಗಳಲ್ಲಿ ಒಂದು ಗರ್ಭಿಣಿಯಾಗಿದ್ದು ಬೀಜಗುರಿಯ ಗೋವನಿತಾಶ್ರಮದಲ್ಲಿ ಆಶ್ರಯ ನೀಡಲಾಗಿದೆ.
Mudipu pick van held for illegal cattle trafficking accused who was set free arrested by police after Bajarang dal demands justice. The prime accused was let free under the influence of some leaders but after social activists demanded justice now the cops have once again arrested the prime accused.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm