ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.

ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am