ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm