ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm