ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm