ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am