ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm