ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm