ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm