ಬ್ರೇಕಿಂಗ್ ನ್ಯೂಸ್
25-09-21 11:14 am Headline Karnataka News Network ಕ್ರೈಂ
ಮುಂಬೈ, ಸೆ. 25: ಹಿಂದಿಯ ಜನಪ್ರಿಯ ಕಾರ್ಯಕ್ರಮ ‘ಕಪಿಲ್ ಶರ್ಮಾ’ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇದೀಗ ಕಾನೂನಿನ ಕಂಟಕ ಎದುರಾಗಿದೆ.
ನ್ಯಾಯಾಲಯದಲ್ಲಿ ಮದ್ಯಪಾನ ಮಾಡುವ ದೃಶ್ಯವೊಂದನ್ನು ಕಪಿಲ್ ಶರ್ಮಾ ಶೋನಲ್ಲಿ ಸೃಷ್ಟಿಸಿ ಟಿವಿಯಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಈ ಕಾರ್ಯಕ್ರಮದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.


ಕಾರ್ಯಕ್ರಮದಲ್ಲಿ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟರು ಮದ್ಯಪಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಲಾಗಿತ್ತು. ಇದು 2020ರ ಜನವರಿ 19 ರಂದು ಪ್ರಸಾರಗೊಂಡಿತ್ತು. ಈ ವರ್ಷದ ಏಪ್ರಿಲ್ 24ರಂದು ಮರು ಪ್ರಸಾರ ಮಾಡಲಾಗಿತ್ತು. ಈ ದೃಶ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ನ್ಯಾಯಾಲಯದಲ್ಲಿ ಮದ್ಯ ಸೇವನೆಯಂತಹ ದೃಶ್ಯವನ್ನು ಸೃಷ್ಟಿಸಿದ್ದು ತಪ್ಪು. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ. ಈ ದೃಶ್ಯದ ಮೂಲಕ ನ್ಯಾಯಲಯದ ಘನತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಪಿಲ್ ಶರ್ಮಾ ಮೊದಲಿನಿಂದಲೂ ಇಂತಹದೆ ತಪ್ಪುಗಳನ್ನು ಮಾಡುತ್ತ ಬಂದಿದೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಮಾತುಗಳು, ಡಬಲ್ ಮೀನಿಂಗ್ ಮಾತುಗಳ ಮೂಲಕ ನೋಡುಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.
ಇನ್ನು ಈ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಂದು ವಿಚಾರಣೆಗೆ ಬರಲಿದ್ದು, ಕಪಿಲ್ ಶರ್ಮಾ ಶೋ ನಿರ್ಮಾಪಕರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
An FIR has been filed against The Kapil Sharma Show makers in the district court of Shivpuri, Madhya Pradesh, as per a report by India Today. The complaint has been filed against one episode where actors were shown consuming alcohol while performing a courtroom scene. The complainant reportedly alleged that the actors disrespected the court.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am