ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm