ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm