ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm