ಬ್ರೇಕಿಂಗ್ ನ್ಯೂಸ್
25-09-21 02:42 pm Headline Karnataka News Network ಕ್ರೈಂ
ಬೆಂಗಳೂರು, ಸೆ. 25 : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನ ಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.
Bangalore Man on Bike brutally murdered by five criminals in broad daylight. The deceased has been identified as Kulla Venkatesh.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm