ಬ್ರೇಕಿಂಗ್ ನ್ಯೂಸ್
25-09-21 03:35 pm Headline Karnataka News Network ಕ್ರೈಂ
ನವದೆಹಲಿ, ಸೆ.25: ನವರಾತ್ರಿ ಉತ್ಸವದ ದಿನಗಳಲ್ಲಿ ಪಾಕಿಸ್ಥಾನದ ಐಎಸ್ಐ ಪ್ರೇರಿತ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಯೋಜನೆ ರೂಪಿಸಿದ್ದಾರೆ ಎಂದು ಕೇಂದ್ರೀಯ ಗುಪ್ತಚರ ಏಜನ್ಸಿಗಳು ಮತ್ತೆ ಎಚ್ಚರಿಕೆ ನೀಡಿವೆ. ಇದರಂತೆ, ದೇಶಾದ್ಯಂತ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲ ರೀತಿಯ ಭದ್ರತಾ ಏಜನ್ಸಿಗಳನ್ನು ಕಟ್ಟೆಚ್ಚರ ಇರುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಸೆ.18ರಂದು ಸೆಂಟ್ರಲ್ ಇಂಟೆಲಿಜೆನ್ಸಿಯಿಂದ ಅಧಿಕೃತ ಸೂಚನೆ ಬಂದಿದ್ದು, ದೇಶದ ಎಲ್ಲ ರಾಜ್ಯಗಳ ಪ್ರಮುಖ ನಗರಗಳು, ಜನನಿಬಿಡ ಪ್ರದೇಶಗಳಲ್ಲಿ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಟಿಫಿನ್ ಮಾದರಿಯಲ್ಲಿ ಬಾಂಬ್ ಇಡುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಐಇಡಿ ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ ನಲ್ಲಿಟ್ಟು ಸ್ಫೋಟಿಸಲು ಸಂಚು ಮಾಡಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.



ನವರಾತ್ರಿ ಸಂದರ್ಭದಲ್ಲಿ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ನಿಗಾ ಇಡಬೇಕು. ಟಿಫಿನ್ ಬಾಕ್ಸ್ ಆಗಿರಬಹುದು ಅಥವಾ ಲಾಜಿಸ್ಟಿಕ್ಸ್ ಗಳಲ್ಲಿ ಬರುವಂತಹ ಪಾರ್ಸಲ್ ಬಾಕ್ಸ್ ಗಳಲ್ಲಿಯೂ ಬಾಂಬ್ ಇರಬಹುದು ಎಂದು ಗುಪ್ತಚರ ಏಜನ್ಸಿ ಎಲರ್ಟ್ ಸಂದೇಶದಲ್ಲಿ ಹೇಳಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಇತ್ತೀಚೆಗಷ್ಟೇ, ಕಳೆದ ಸೆ.14ರಂದು ದೆಹಲಿ ಪೊಲೀಸರು ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರು ಮಂದಿಯನ್ನು ಬಂಧಿಸಿದ್ದರು. ಪ್ರಕರಣ ಸಂಬಂಧಿಸಿ ಹಲವರನ್ನು ಉತ್ತರ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅದರಲ್ಲಿ ಇಬ್ಬರು ಉಗ್ರರು ಪಾಕಿಸ್ಥಾನದಲ್ಲಿ ಐಎಸ್ಐ ಪ್ರೇರಿತರಾಗಿ ಬಾಂಬ್ ಸ್ಫೋಟ, ರೈಫಲ್ ಬಳಕೆ ಬಗ್ಗೆ ತರಬೇತಿ ಪಡೆದು ಬಂದಿದ್ದರು ಎನ್ನುವುದು ಬಯಲಾಗಿತ್ತು. ಅದರ ಬೆನ್ನಲ್ಲೇ ನವರಾತ್ರಿ ಮತ್ತು ಉತ್ಸವ ಸಂದರ್ಭದಲ್ಲಿ ಭಾರೀ ಸ್ಫೋಟಕ್ಕೆ ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಏಜನ್ಸಿಗಳು ದೇಶದಲ್ಲಿ ಮತ್ತೆ ಎಲರ್ಟ್ ಘೋಷಣೆ ಮಾಡಿದೆ.
Pakistan's spy agency Inter-Services Intelligence (ISI) is reportedly planning to carry out a big terror strike in the country during the festival season, a crucial Intelligence alert has revealed.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am