ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm