ಬ್ರೇಕಿಂಗ್ ನ್ಯೂಸ್
27-09-21 04:43 pm Mangaluru Correspondent ಕ್ರೈಂ
ಬಂಟ್ವಾಳ, ಸೆ.27: ಜಮೀನು ನಿಮಿತ್ತ ತೆರಳಿದ್ದ ಮಹಿಳೆ ಮತ್ತು ಕುಟುಂಬಕ್ಕೆ ಮಂಗಳೂರಿನ ವಕೀಲ ಸೇರಿದಂತೆ ನಾಲ್ವರು ಗುಂಪು ಸೇರಿಕೊಂಡು ಅಶ್ಲೀಲ ಪದಗಳಿಂದ ನಿಂದಿಸಿದ್ದಲ್ಲದೆ, ಜಮೀನಿಗೆ ಪ್ರವೇಶಿಸದಂತೆ ಜೀವ ಬೆದರಿಕೆ ಒಡ್ಡಿದ ಘಟನೆ ಮಂಚಿ ಗ್ರಾಮದಲ್ಲಿ ನಡೆದಿದೆ.
ಮಂಗಳೂರಿನ ನಾಗೇಶ್ ರಾವ್ ಪತ್ತುಮುಡಿ ಎಂಬವರು ತನ್ನ ಪತ್ನಿ ಮತ್ತು ಮಗನ ಜೊತೆ ಮಂಚಿ ಗ್ರಾಮದಲ್ಲಿರುವ ತಮ್ಮ ಕೃಷಿ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ರಸ್ತೆಗೆ ಅಡ್ಡಗಟ್ಟಿದ ಮಂಗಳೂರಿನಲ್ಲಿ ವಕೀಲ ವೃತ್ತಿಯಲ್ಲಿರುವ ಚಿದಾನಂದ ರಾವ್, ಅವರ ಸಹೋದರ ನಿವೃತ್ತ ಬಿಎಸ್ಸೆನ್ನೆಲ್ ಅಧಿಕಾರಿ ಯಜ್ಞೇಶ್ವರ ರಾವ್, ಸಂಬಂಧಿಕರಾದ ಆತ್ಮರಂಜನ ಕಾರಂತ ಮತ್ತು ಶರತ್ಚಂದ್ರ ಕಾರಂತ ಎಂಬವರು ಮಹಿಳೆಯೆಂದು ನೋಡದೇ ತೀರಾ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಹೀಗೆ ನಿಂದಿಸಿ ಬೆದರಿಕೆ ಹಾಕಿದ್ದನ್ನು ನಾಗೇಶ ರಾವ್ ಮಗ ವಿಡಿಯೋ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ತೀರಾ ಅಸಹ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಕೃಷಿ ಜಮೀನಿಗೆ ಹೋಗದಂತೆ ತಡೆದು ಜೀವ ಬೆದರಿಕೆ ಒಡ್ಡಿದ್ದಾರೆ.




ಮಂಚಿ ಗ್ರಾಮದಲ್ಲಿ ನಾಗೇಶ ರಾವ್ ಕುಟುಂಬಕ್ಕೆ 4.5 ಎಕ್ರೆ ಜಮೀನು ಇದ್ದು ಈ ವಿಚಾರದಲ್ಲಿ ಪಕ್ಕದಲ್ಲಿ ಜಮೀನು ಹೊಂದಿರುವ ಚಿದಾನಂದ ರಾವ್ ಮತ್ತು ತಂಡದವರು ಕಳೆದ ಹಲವು ಸಮಯದಿಂದ ಜಟಾಪಟಿ ನಡೆಸುತ್ತಿದ್ದಾರೆ. ಜಮೀನು ವಿಚಾರದ ವ್ಯಾಜ್ಯ ಸದ್ಯ ಎಸಿ ಕೋರ್ಟಿನಲ್ಲಿದ್ದು ಸದ್ರಿ ಜಮೀನಿಗೆ ಬಾರದಂತೆ ಚಿದಾನಂದ ರಾವ್ ತಡೆ ಒಡ್ಡುತ್ತಿದ್ದಾರೆ ಎನ್ನಲಾಗಿದೆ.
ಸೆ.24 ರಂದು ಮಧ್ಯಾಹ್ನ ಜಮೀನಿಗೆ ತೆರಳಿದ್ದ ವೇಳೆ ರಸ್ತೆಗೆ ಕಲ್ಲು ಇಡಲಾಗಿತ್ತು. ಇದನ್ನು ತೆರವು ಮಾಡಲು ಪ್ರಯತ್ನಿಸಿದಾಗ ಅಡ್ಡಗಟ್ಟಿದ ತಂಡ ಅವಾಚ್ಯ ಪದಗಳಿಂದ ನಿಂದಿಸಿದೆ. ಅಲ್ಲದೆ, ತಾವು ತೆರಳಿದ್ದ ಓಮ್ನಿ ಕಾರಿಗೆ ಹಾನಿ ಮಾಡಿದ್ದಾರೆ ಎಂದು ನಾಗೇಶ್ ರಾವ್ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Bail matter dispute Mangalore Lawyer harrasing woman with vulgur words and life threatening statements video goes viral. A case has been registered at the Bantwal rural police station. The lawyer has been identided as Chidananda Rao.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm