ಬ್ರೇಕಿಂಗ್ ನ್ಯೂಸ್
27-09-21 10:36 pm Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.27: ತಮ್ಮ ಅಕ್ರಮ ಸಂಬಂಧ ಪುತ್ರಿಗೂ ತಿಳಿದು ಮರ್ಯಾದೆ ಬಟಾ ಬಯಲಾಯ್ತು ಅಂತ ಮುಜುಗರ ಪಟ್ಟುಕೊಂಡ ತಾಯಿ ತನ್ನ ಕರುಳ ಕುಡಿಯನ್ನೇ ಪ್ರಿಯಕರನ ಜೊತೆ ಸೇರಿ ಕತ್ತು ಹಿಸುಕಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಎಂಬಲ್ಲಿ ಸೆ.5 ರಂದು ಬಾವಿಯಲ್ಲಿ ಯುವತಿ ಶವ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಿದ್ದ ಮೃತ ಯುವತಿಯ ತಂದೆ, ತಾಯಿ, ದೊಡ್ಡಪ್ಪನೇ ಕೊಲೆಗಾರರಾಗಿದ್ದು ಪೊಲೀಸರನ್ನು ಕೈಕೋಳ ತೊಡಿಸಿದ್ದಾರೆ.
ಮುಸಲ್ಮಾನಪುರ ಗ್ರಾಮದ ಪರ್ವೀನ್ ಮುಬಾರಕ್ (34) ಎಂಬ ಯುವತಿಯ ಕೊಲೆ ನಡೆದಿದ್ದು ಪಾಳು ಬಾವಿಯಲ್ಲಿ ಶವ ಪತ್ತೆಯಾಗಿತ್ತು. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ತನಿಖೆ ಬಳಿಕ ಮೃತಳ ದೊಡ್ಡಪ್ಪ ಮೈದಗೋಳಂ ಪ್ಯಾರೇಜಾನ್, ಮೃತಳ ತಾಯಿ ಗುಲ್ಜಾರ್ ಬಾನು, ಮೃತಳ ತಂದೆ ಪ್ಯಾರೇಜಾನ್ ಅವರನ್ನು ಬಂಧಿಸಿದ್ದಾರೆ.
ಮೃತಳ ತಾಯಿ ಗುಲ್ಜಾರ್ ಬಾನುಗೆ ತನ್ನ ಅಕ್ಕನ ಗಂಡನ ಜೊತೆ ಅನೈತಿಕ ಸಂಬಂಧ ಇದ್ದುದು ಮಗಳಿಗೆ ಗೊತ್ತಾಗಿ ಪ್ರಶ್ನೆ ಮಾಡಿದ್ದಳು. ಅದೇ ಕಾರಣಕ್ಕೆ ತಾಯಿ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದಾಳೆ.

ಮೃತ ಪರ್ವೀನ್ ಮುಬಾರಕ್ 10 ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ಪ್ರಿಯಕರ ಶಿವಪ್ಪನೊಂದಿಗೆ ವಾಸವಿದ್ದಳು. ಆದ್ರೆ ಪ್ರಿಯಕರ ಶಿವಪ್ಪ ಕೆಲ ಸಮಯದಲ್ಲಿ ಬಳಿಕ ಮೃತಪಟ್ಟಿದ್ದ. ನಂತರ ಮತ್ತೊಬ್ಬ ವಿನಯ್ ಕುಮಾರ್ ಜೊತೆ ವಾಸವಾಗಿದ್ದಳು. ಆದರೆ ಆತನೂ ಕೆಲ ವರ್ಷಗಳಲ್ಲಿ ಮೃತಪಟ್ಟಿದ್ದ. ಇಬ್ಬರನ್ನು ಕಳೆದುಕೊಂಡ ಪರ್ವೀನ್, ತವರು ಮನೆ ಸೇರಿದ್ದಳು.
ಆದರೆ, ಮನೆಗೆ ಬಂದರೆ ತಾಯಿಯೇ ತನ್ನ ಅಕ್ಕನ ಗಂಡನ ಜೊತೆ ಸಂಬಂಧ ಇರಿಸಿಕೊಂಡಿದ್ದಳು. ತನ್ನ ಅನೈತಿಕ ಸಂಬಂಧವನ್ನು ತಿಳಿದ ಮಗಳು ಪ್ರಶ್ನೆ ಮಾಡಿದ್ದಳು. ಆದರೆ ಕಟ್ಟಿಕೊಂಡ ಗಂಡನ ಬಿಟ್ಟು ಬೇರೆಯವರ ಜೊತೆ ಹೋಗಿ ಮರಳಿ ಬಂದಿದ್ದ ವಿಚಾರ ಮನೆಯಲ್ಲಿ ಕೋಪ ಇತ್ತು. ಅದರ ಜೊತೆಗೆ, ತನ್ನ ಸುಖಕ್ಕೆ ಅಡ್ಡಬಂದಿದ್ದ ನೆಪದಲ್ಲಿ ತಾಯಿಯೇ ಕೊಲೆಗೆ ಸ್ಕೆಚ್ ಹಾಕಿದ್ದಳು. ಅಕ್ಕನ ಗಂಡ ಹಾಗೂ ತನ್ನ ಪತಿಯೊಂದಿಗೆ ಸೇರಿ ದಾರದಿಂದ ಬಿಗಿದು ಕೊಲೆ ಮಾಡಿದ್ದಾಳೆ. ಆನಂತರ, ಪಾಳು ಬಾವಿಗೆ ಎಸೆದಿದ್ದರು. ಶವದಲ್ಲಿ ಕತ್ತು ಬಿಗಿದಿದ್ದು ಕಂಡಿದ್ದರಿಂದ ಪೊಲೀಸರು ಸಂಶಯಗೊಂಡು ವಿಚಾರಣೆ ನಡೆಸಿದ್ದರು. ಈ ವೇಳೆ, ಆಕೆಯೇ ನೇಣು ಬಿಗಿದು ಸಾವನ್ನಪ್ಪಿದ್ದಾಗಿ ಕತೆ ಕಟ್ಟಿದ್ದರು.
ಆದರೆ, ಪೊಲೀಸರ ವಿಚಾರಣೆಯಲ್ಲಿ ಸತ್ಯ ಹೊರಬಂದಿದ್ದು ಅಸಲಿ ಆರೋಪಿಳು ಜೈಲು ಸೇರಿದ್ದಾರೆ.
Chikkaballapur Mother and family Murder own daughter over illicit affiar tell cops as suicide three arrested. Mother along with her brothers had killed thier daughter and then threw her into the well and represented it as suicide to the police. The deceases has been identified as Parvin.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am